ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ ಯುವಕ ನೀರುಪಾಲು: ಮೃತ ದೇಹ ಪತ್ತೆಹಚ್ಚಿದ ಶೌರ್ಯ ಸ್ವಯಂಸೇವಕರು

ಕಡಬ, ನವೆಂಬರ್ 15,2023: ಕಡಬ ತಾಲ್ಲೂಕಿನ ನೆಲ್ಯಾಡಿಯ ಗುಂಡ್ಯ ನದಿಯಲ್ಲಿ ಈಜಲು ಹೋದ ಯುವಕ ನೀರು ಪಾಲಾದ ಘಟನೆ ನಡೆದಿದೆ.

ಸಿರಿಬಾಗಿಲು ಗ್ರಾಮದ ಬರ್ಚಿನಾಳ ನಿವಾಸಿ ಸೋಮಶೇಖರ್(43) ಸಾವನ್ನಪ್ಪಿದವರು. ನವೆಂಬರ್ 14 ರಂದು ಸಂಜೆ ಗುಂಡ್ಯ ಹೊಳೆಗೆ ಸ್ನಾನಕ್ಕೆ ಹೋಗಿದ್ದ ವೇಳೆಗೆ ಕಾಲು ಜಾರಿ ನೀರಿಗೆ ಬಿದ್ದು ಕಣ್ಮರೆಯಾಗಿದ್ದು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ಗುಂಡ್ಯ ಇದರ ಸ್ವಯಂಸೇವಕರು ಸುರೇಶ್ ಇವರ ನೇತೃತ್ವದಲ್ಲಿ ಅಗ್ನಿಶಾಮಕ ಇಲಾಖೆಯ ಜೊತೆಯಾಗಿ ಕಾರ್ಯಾಚರಣೆ ನಡೆಸಿದ್ದರು.  ಮೃತದೇಹ ಮದ್ಯಾಹ್ನ 3.30 ರ ವೇಳೆಗೆ ಪತ್ತೆಯಾಗಿದ್ದು ನೆಲ್ಯಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Article
Previous ಉಚಿತ ಆರೋಗ್ಯ ತಪಾಸಣಾ ಶಿಬಿರ

Leave Your Comment

Connect With Us

Janajagruthi Vedike Regional Office Belthangady, Surendra Mansion Building, First floor, Near Syndicate Bank, Main Road, Belthangady – 574214  

Follow Us On

[mc4wp_form id="228"]

Contact Us

SKDRDP® ©2023 | All Rights Reserved