ಮೂಡಬಿದಿರೆ: ಹೊಸಬೆಟ್ಟುಕಾಯ್ದಿಟ್ಟಅರಣ್ಯಪ್ರದೇಶದಲ್ಲಿ 8 ಕಿಲೋಮೀಟರ್ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಚತೆ

ಫೆಬ್ರವರಿ 21; ಕಸವನ್ನು ಎಲ್ಲೆಂದರೆ ಅಲ್ಲಿ ಎಸೆಯುವುದು ಇತ್ತೀಚಿನ ಬಹಳ ದೊಡ್ಡ ಸಮಸ್ಯೆಕಾಡಿನ ರಸ್ತೆಯಲ್ಲಿ ಕಸವನ್ನು ಎಸೆಯಲು ಅವಿದ್ಯಾವಂತರು ಬರುವುದಿಲ್ಲ. ವಿದ್ಯಾವಂತರು ಇಂತಹ ಸಮಸ್ಯೆಗಳಿಗೆ ಕಾರಣವಾಗುತ್ತಿದ್ದಾರೆ. ಇದು ಅಪಾಯಕಾರಿ ಬೆಳವಣಿಗೆ ಎಂದು ಅರಣ್ಯ ಇಲಾಖೆಯ ಮಂಜುನಾಥ್ ಹೇಳಿದರು.  

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಅರಣ್ಯ ಇಲಾಖೆ ಮೂಡುಬಿದಿರೆ ವಲಯ, ಹೊಸಬೆಟ್ಟು ಗ್ರಾಮ ಪಂಚಾಯತ್, ತಾಕೊಡೆ, ಪುಚ್ಚಮೊಗರು ಗ್ರಾಮಸ್ಥರ ಸಹಭಾಗಿತ್ವದಲ್ಲಿ ನಡೆದ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದು ಅಪರಾಧ. ಕಾನೂನಿನ ಮೂಲಕ ಶಿಕ್ಷೆ ವಿಧಿಸಬಹುದು. ದಂಡ ವಿಧಿಸಬಹುದು. ಆದರೆ ಇವಕ್ಕೆ ತಲೆಕೆಡಿಸಿಕೊಳ್ಳದೇ ಕಸ ಬಿಸಾಡುವ ಕೃತ್ಯ ಮಾಡುತ್ತಿದ್ದಾರೆ. ಪ್ರಜ್ಞಾವಂತರು ಮಾಡಿದ ಕಸವನ್ನು ಪರಿಸರದ ಬಗ್ಗೆ ಪ್ರಜ್ಞೆ ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಶೌರ್ಯ. ವಿಪತ್ತು ನಿರ್ವಹಣಾ ತಂಡ, ಸ್ವಸಹಾಯ ಸಂಘಗಳ ಒಕ್ಕೂಟ, ಸ್ಥಳೀಯರೆಲ್ಲರೂ ಸೇರಿಕೊಂಡು ಸ್ವಚ್ಛ ಮಾಡಲು ನಿರ್ಧರಿಸಿರುವುದು ಉತ್ತಮ ಬೆಳವಣಿಗೆ.  ಒಮ್ಮೆ ಸ್ವಚ್ಛಗೊಳಿಸಿದ ನಂತರ ಪುನಃ ಕಸ ಎಸೆಯುವುದು ತಪ್ಪಿಸುವ ಕೆಲಸ ಆಗಬೇಕು. ನಿಟ್ಟಿನಲ್ಲಿ ಸಿ.ಸಿ ಕ್ಯಾಮರಾ ಅಳವಡಿಸುವ ಕೆಲಸ ಆಗಬೇಕು. ಅರಣ್ಯ ಇಲಾಖೆಯ ವತಿಯಿಂದ ಬಗ್ಗೆ ಪ್ರಯತ್ನಿಸಲಾಗುವುದು. ಮೂಡಬಿದಿರೆ ನಗರದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವುದು ತಡೆಯಲು ಕಸ ಎಸೆದವರ ಭಾವಚಿತ್ರವನ್ನು ಸಾರ್ವಜನಿಕ ಸ್ಥಳದಲ್ಲಿ ಅಳವಡಿಸುವ ಕೆಲಸ ಮಾಡಲಾಗುತ್ತಿದೆ. ಇದರಿಂದಾಗಿ ಕಸ ಎಸೆಯುವ ಸಮಸ್ಯೆ ಒಂದಿಷ್ಟು ಕಡಿಮೆ ಆಗಿದೆ ಇಂತಹ ಪ್ರಯತ್ನ ಎಲ್ಲೆಡೆ ಆಗಬೇಕು ಎಂದರು. 

 ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ. ಪಾಯ್ಸ್ ಇವರ ಮಾರ್ಗದರ್ಶನದಲ್ಲಿ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್  ರವರು ಮಾತನಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಮೂಲಕ ಇಂತಹ ಕಾರ್ಯಕ್ರಮ ಗಳನ್ನು ರಾಜ್ಯದ 90 ತಾಲ್ಲೂಕು ಗಳಲ್ಲಿ ಮಾಡಿಕೊಂಡು ಬರಲಾಗುತ್ತಿದೆ. 10,300 ಸ್ವಯಂಸೇವಕರು ಶೌರ್ಯ ಘಟಕಕ್ಕೆ ಸೇರ್ಪಡೆ ಗೊಂಡಿದ್ದು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಚತೆ, ದೇವಸ್ಥಾನದ ಪರಿಸರದಲ್ಲಿ ಸ್ವಚ್ಚತಾ ಶ್ರಮದಾನ, ಸಾರ್ವಜನಿಕ ಸ್ಥಳಗಳಲ್ಲಿ ಶ್ರಮದಾನವನ್ನು ಕಳೆದ ಮೂರು ವರ್ಷಗಳಿಂದ ಮಾಡಿಕೊಂಡು ಬರಲಾಗುತ್ತಿದೆ. ವೇಣೂರು ಬಾಹುಬಲಿ ಮಹಾ ಮಸ್ತಕಾಭಿಷೇಕ ಇರುವ ಹಿನ್ನಲೆಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಇರುವ ಕಸದ ರಾಶಿ ಸ್ವಚ್ಛಗೊಳಿಸಲು ಇಂದು ಸೇರಿದ್ದು 65 ಸ್ವಯಂಸೇವಕರು ಶ್ರಮದಾನ ಮಾಡುತ್ತಿದ್ದಾರೆ ಎಂದರು. 

 ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸೌಮ್ಯ , ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಡಬಿದರೆ ಯೋಜನಾಧಿಕಾರಿ ಸುನೀತಾ, ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ, ವಿಪತ್ತು ನಿರ್ವಹಣಾ ಯೋಜನಾಧಿಕಾರಿ ಜೈವಂತ ಪಟಗಾರ್, ಜನಜಾಗೃತಿ ಯೋಜನಾಧಿಕಾರಿ ಗಣೇಶ್, ಅರಣ್ಯಾಧಿಕಾರಿ ಅಶ್ವಿತ್ ಗಟ್ಟಿ, ಗುರುವಾಯನಕೆರೆ ತಾಲ್ಲೂಕು ಮೇಲ್ವಿಚಾರಕರು, ಸ್ಥಳಿಯರಾದ ರಿಕ್ಕಿ, ಮೂಡುಬಿದಿರೆ ವಲಯದ ಒಕ್ಕೂಟದ ಪದಾಧಿಕಾರಿಯಾಗಿ, ಸೇವಾಪ್ರತಿನಿಧಿಗಳು, ಮೇಲ್ವಿಚಾರಕರು ಹಾಜರಿದ್ದರು.

Share Article
Previous ಬಡ ಕುಟುಂಬಕ್ಕೆ ಹೊಸ ಮನೆ; ಶ್ರಮದಾನ ನಡೆಸಿದ ಶಿರಸಿ ಘಟಕದ ಸ್ವಯಂಸೇವಕರು

Leave Your Comment

Connect With Us

Janajagruthi Vedike Regional Office Belthangady, Surendra Mansion Building, First floor, Near Syndicate Bank, Main Road, Belthangady – 574214  

Follow Us On

[mc4wp_form id="228"]

Contact Us

SKDRDP® ©2023 | All Rights Reserved