ಹುಲೇಕಲ್ ಘಟಕದ ಸ್ವಯಂಸೇವಕರಿಗೆ ಮಾತೃಶ್ರೀ ಅಮ್ಮನವರಿಂದ ಸಂದೇಶ

ಶಿರಸಿ ತಾಲ್ಲೂಕಿನ ಹುಲೇಕಲ್ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರವಾಸ ಕೈಗೊಂಡು ಮಾತೃಶ್ರೀ ಅಮ್ಮನವರಿಂದ ಆಶೀರ್ವಾದ ಪಡೆದುಕೊಂಡರು.

ಶೌರ್ಯ ತಂಡದ ಮೂಲಕ ಯುವಕರು ಒಗ್ಗಟ್ಟಾಗಿ ಸಮಾಜ ಸೇವೆಯಲ್ಲಿ ತೊಡಗಿಕೊಂಡ ಸ್ವಯಂಸೇವಕರಿಗೆ ಅಮ್ಮನವರು ಅಭಿನಂದನೆ ಸಲ್ಲಿಸಿ, ರಾಜ್ಯದಾದ್ಯಂತ ನಡೆಯುತ್ತಿರುವ ಶೌರ್ಯ ಕಾರ್ಯಕ್ರಮದ ಚಟುವಟಿಕೆಗಳ ಬಗ್ಗೆ ಸಂದೇಶ ನೀಡಿದರು.

ಬೆಳ್ತಂಗಡಿ ತಾಲ್ಲೂಕಿನ ಎಲ್ಲಾ ಘಟಕಗಳು ಬಹಳ ಉತ್ತಮವಾಗಿ ನಡೆಯುತ್ತಿದ್ದು ಅವುಗಳಂತೆ ಶಿರಸಿ ಭಾಗದಲ್ಲಿ ಸೇವಾ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಸ್ವಯಂಪ್ರೇರಣೆಯಿಂದ ತೊಡಗಿಸಿಕೊಳ್ಳಲು ಮಾರ್ಗದರ್ಶನ ನೀಡಿದರು.

ಘಟಕದ ಸಂಯೋಜಕರು, ಘಟಕ ಪ್ರತಿನಿಧಿ ಮತ್ತು 14 ಮಂದಿ ಸ್ವಯಂಸೇವಕರು ಉಪಸ್ಥಿತರಿದ್ದರು.

ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿ ಜೈವಂತ ಪಟಗಾರ ಮತ್ತು ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

Share Article
Previous ಕಾಳಜಿ ಕೇಂದ್ರಗಳಲ್ಲಿ ಜಾನುವಾರುಗಳಿಗೆ ಮೇವು ವ್ಯವಸ್ಥೆ ಮಾಡಿದ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸ್ವಯಂಸೇವಕರು

Leave Your Comment

Connect With Us

Janajagruthi Vedike Regional Office Belthangady, Surendra Mansion Building, First floor, Near Syndicate Bank, Main Road, Belthangady – 574214  

Follow Us On

[mc4wp_form id="228"]

Contact Us

SKDRDP® ©2023 | All Rights Reserved